ಹಾಸನ : ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ ೨೮ ಸ್ಥಾನಗಳನ್ನು ಗೆದ್ದರೇ ಅದರ ಕ್ರೆಡಿಟ್ ನೇರವಾಗಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ವಿನಃ ಬೇರಾವ ನಾಯಕರಿಗೆ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಹಿಂದೂ ಧರ್ಮದ ಮತ್ತು ದೇಶದ ಉದ್ದಾರದ ದೃಷ್ಠಯಿಂದ ನರೇಂದ್ರ ಮೋದಿ ಅವರು ೩ನೇ ಬಾರಿಗೆ ಪ್ರಧಾನಿಯಾಗಬೇಕು ಎಂಬ ಕಾರಣದಿಂದಾಗಿ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದರು.
ಬಿಜೆಪಿ ಗೆಲುವಿಗೆ ಜೋಡೆತ್ತು ಕೆಲಸ ಮಾಡುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಯೆತ್ನಾಳ್, ಜೋಡೆತ್ತುಗಳಲ್ಲಿ ಒಬ್ಬರು ದೆಹಲಿಯಲ್ಲಿ ಮತ್ತು ಇನ್ನೊಬ್ಬರು ಬೆಂಗಳೂರಿನಲ್ಲಿದ್ದಾರೆ ಎಂದರು.
ಇದೇ ವೇಳೆ ಮಾಜಿ ಸಚಿವ ವಿ.ಸೋಮಣ್ಣ ರಾಜೀನಾಮೆ ನೀಡುವುದಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣ ಎಲ್ಲರಿಗೂ ತಿಳಿದಿದೆ. ದುರದೃಷ್ಟವಶಾತ್ ಬಿಜೆಪಿಯಲ್ಲಿರುವ ಕೆಲವು ನಾಯಕರು ಅವರನ್ನು ರಾಜ್ಯದಲ್ಲಿ ಮಹಾನ್ ನಾಯಕರೆಂದು ಬಿಂಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…