ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ.
ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ.
ಈ ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾವಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಇಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಉಡುಗಿಯ ಸ್ವಗ್ರಾಮದಲ್ಲಿ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದರು.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ತಾತ (ಶತಾಯುಷಿ ಡಾ. ಭೀಮಣ್ಣ ಖಂಡ್ರೆ), ತಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಮೊಮ್ಮಗ (ಬೀದರ್ ಕಾಂಗ್ರೆಸ್ ಅಭ್ಯರ್ಥಿ) ಸಾಗರ್ ಖಂಡ್ರೆ ಮತ ಚಲಾಯಿಸಿದರು.
ಇನ್ನು, ಶಿವಮೊಗ್ಗ ನಗರದ ಬಸವನಗುಡಿಯ ಸತ್ಯ ಸಾಯಿ ಶಾಲೆಯ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಡಿ ಹೆಚ್ ಶಂಕರಮೂರ್ತಿ ಅವರು, ಪತ್ನಿ ಶ್ರೀಮತಿ ಸತ್ಯವತಿ ಅವರು ಮತ್ತು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು, ಪತ್ನಿ ಶ್ರೀಮತಿ ಪ್ರತಿಭಾ ಅರುಣ್ ಅವರು, ಪುತ್ರಿ ಡಿ.ಎ. ಸುಪ್ರಿಯಾ ಮತದಾನ ಮಾಡಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…