ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ.
ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ.
ಈ ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾವಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಇಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಉಡುಗಿಯ ಸ್ವಗ್ರಾಮದಲ್ಲಿ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದರು.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ತಾತ (ಶತಾಯುಷಿ ಡಾ. ಭೀಮಣ್ಣ ಖಂಡ್ರೆ), ತಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಮೊಮ್ಮಗ (ಬೀದರ್ ಕಾಂಗ್ರೆಸ್ ಅಭ್ಯರ್ಥಿ) ಸಾಗರ್ ಖಂಡ್ರೆ ಮತ ಚಲಾಯಿಸಿದರು.
ಇನ್ನು, ಶಿವಮೊಗ್ಗ ನಗರದ ಬಸವನಗುಡಿಯ ಸತ್ಯ ಸಾಯಿ ಶಾಲೆಯ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಡಿ ಹೆಚ್ ಶಂಕರಮೂರ್ತಿ ಅವರು, ಪತ್ನಿ ಶ್ರೀಮತಿ ಸತ್ಯವತಿ ಅವರು ಮತ್ತು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು, ಪತ್ನಿ ಶ್ರೀಮತಿ ಪ್ರತಿಭಾ ಅರುಣ್ ಅವರು, ಪುತ್ರಿ ಡಿ.ಎ. ಸುಪ್ರಿಯಾ ಮತದಾನ ಮಾಡಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…