ಬೆಂಗಳೂರು: ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಆದ್ದರಿಂದ ವಿರೋಧ ಪಕ್ಷದ ನಾಯಕನ ಸ್ಥಾನವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕು ಎಂದು ನಾನು ಕೂಡ ಸಲಹೆ ನೀಡಿದ್ದೆ ಎಂದರು.
ಬಿಜೆಪಿ ಮತ್ತು ಮೋದಿಯನ್ನು ಎದುರಿಸಲು ನೀವೇ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಕಾರ್ಯಕಾರಣಿ ಸಮಿತಿ ಹಾಗೂ ನಾನು ಕೂಡ ಒತ್ತಾಯ ಮಾಡಿದ್ದೆ. ಈಗ ಅವರು ಆ ಜವಾಬ್ದಾರಿ ವಹಿಸಿಕೊಂಡಿರುವುದು ನನಗೆ ತುಂಬಾ ಸಂತಸವಾಗಿದೆ ಎಂದರು.
ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ನಾಳೆ ದೆಹಲಿಗೆ ಹೋಗುತ್ತೇನೆ. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ದೆಹಲಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…