ಕಲಬುರಗಿ : ಯಾದಗಿರಿ ಜಿಲ್ಲೆಯಲ್ಲಿ ಡಿಎಚ್ಓ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಭುಲಿಂಗ ಮಾನಕರ ನಿವಾಸ ಮತ್ತು ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಮಾಡಿದೆ.
ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರರಾಗಿರುವ ಪ್ರಭುಲಿಂಗ ಅವರ ಕಲಬುರಗಿ ಕರುಣೇಶ್ವರ ಕಾಲೋನಿ, ಫಾರ್ಮ್ ಹೌಸ್ ಮತ್ತು ಯಾದಗಿರಿಯ ಕಚೇರಿ ಮೇಲೆ ಇಂದು (ಮಂಗಳವಾರ) ಬೆಳಿಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರಲ್ಲೂ ಭ್ರಷ್ಟರ ಭೇಟೆ : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಎಂ.ಎಸ್ ಗ್ರೂಪ್ ಕಂಪನಿಗೆ ಸೇರಿದ ಮೈಸೂರಿನಲ್ಲಿ ಸುಮಾರು 12 ಕಡೆಗಳಲ್ಲಿ ಎಡಿಜಿಪಿ ಪ್ರಶಾಂತ್ ಕುಮಾರ್, ಐಜಪಿ ಸುಬ್ರಮಣೇಶ್ವರ ರಾವ್ ನೇತೃತ್ವದ ಲೋಕಾಯುಕ್ತ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ಜೊತೆಗೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ ಹಾಗೂ ಅರಣ್ಯ ಇಲಾಖೆಯ ಡಿಆರ್ ಎಫ್ ಓ ಅವರ ಬಳ್ಳಾರಿ, ಗಂಗಾಗವತಿ ಮತ್ತು ಹೊಸಪೇಟೆ, ಕಂಪ್ಲಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನಡಿದ್ದ, ಬೆಂಗಳೂರಿನ 3 ಕಡೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪ ಇನ್ನೆಲೆಯ ಅಧಿಕಾರಿಗಳ ಮನೆ ಹಾಗೂ ಇತರ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…