ಕಲಬುರಗಿ : ಯಾದಗಿರಿ ಜಿಲ್ಲೆಯಲ್ಲಿ ಡಿಎಚ್ಓ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಭುಲಿಂಗ ಮಾನಕರ ನಿವಾಸ ಮತ್ತು ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಮಾಡಿದೆ.
ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರರಾಗಿರುವ ಪ್ರಭುಲಿಂಗ ಅವರ ಕಲಬುರಗಿ ಕರುಣೇಶ್ವರ ಕಾಲೋನಿ, ಫಾರ್ಮ್ ಹೌಸ್ ಮತ್ತು ಯಾದಗಿರಿಯ ಕಚೇರಿ ಮೇಲೆ ಇಂದು (ಮಂಗಳವಾರ) ಬೆಳಿಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರಲ್ಲೂ ಭ್ರಷ್ಟರ ಭೇಟೆ : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಎಂ.ಎಸ್ ಗ್ರೂಪ್ ಕಂಪನಿಗೆ ಸೇರಿದ ಮೈಸೂರಿನಲ್ಲಿ ಸುಮಾರು 12 ಕಡೆಗಳಲ್ಲಿ ಎಡಿಜಿಪಿ ಪ್ರಶಾಂತ್ ಕುಮಾರ್, ಐಜಪಿ ಸುಬ್ರಮಣೇಶ್ವರ ರಾವ್ ನೇತೃತ್ವದ ಲೋಕಾಯುಕ್ತ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ಜೊತೆಗೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ ಹಾಗೂ ಅರಣ್ಯ ಇಲಾಖೆಯ ಡಿಆರ್ ಎಫ್ ಓ ಅವರ ಬಳ್ಳಾರಿ, ಗಂಗಾಗವತಿ ಮತ್ತು ಹೊಸಪೇಟೆ, ಕಂಪ್ಲಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನಡಿದ್ದ, ಬೆಂಗಳೂರಿನ 3 ಕಡೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪ ಇನ್ನೆಲೆಯ ಅಧಿಕಾರಿಗಳ ಮನೆ ಹಾಗೂ ಇತರ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…