ಕಲಬುರಗಿ : ಯಾದಗಿರಿ ಜಿಲ್ಲೆಯಲ್ಲಿ ಡಿಎಚ್ಓ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಭುಲಿಂಗ ಮಾನಕರ ನಿವಾಸ ಮತ್ತು ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಮಾಡಿದೆ.
ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರರಾಗಿರುವ ಪ್ರಭುಲಿಂಗ ಅವರ ಕಲಬುರಗಿ ಕರುಣೇಶ್ವರ ಕಾಲೋನಿ, ಫಾರ್ಮ್ ಹೌಸ್ ಮತ್ತು ಯಾದಗಿರಿಯ ಕಚೇರಿ ಮೇಲೆ ಇಂದು (ಮಂಗಳವಾರ) ಬೆಳಿಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರಲ್ಲೂ ಭ್ರಷ್ಟರ ಭೇಟೆ : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಎಂ.ಎಸ್ ಗ್ರೂಪ್ ಕಂಪನಿಗೆ ಸೇರಿದ ಮೈಸೂರಿನಲ್ಲಿ ಸುಮಾರು 12 ಕಡೆಗಳಲ್ಲಿ ಎಡಿಜಿಪಿ ಪ್ರಶಾಂತ್ ಕುಮಾರ್, ಐಜಪಿ ಸುಬ್ರಮಣೇಶ್ವರ ರಾವ್ ನೇತೃತ್ವದ ಲೋಕಾಯುಕ್ತ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ಜೊತೆಗೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ ಹಾಗೂ ಅರಣ್ಯ ಇಲಾಖೆಯ ಡಿಆರ್ ಎಫ್ ಓ ಅವರ ಬಳ್ಳಾರಿ, ಗಂಗಾಗವತಿ ಮತ್ತು ಹೊಸಪೇಟೆ, ಕಂಪ್ಲಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನಡಿದ್ದ, ಬೆಂಗಳೂರಿನ 3 ಕಡೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದೆ. ಭ್ರಷ್ಟಾಚಾರ ಆರೋಪ ಇನ್ನೆಲೆಯ ಅಧಿಕಾರಿಗಳ ಮನೆ ಹಾಗೂ ಇತರ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…