ರಾಜ್ಯ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ ಎಂದರು.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

32 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

1 hour ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago