Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.

ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್‍ಸಿಎಲ್‍ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್‌ ಶಾಕ್‌ ನೀಡಿದ್ದಾರೆ.

Tags:
error: Content is protected !!