ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು
ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್ಸಿಎಲ್ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್ ಶಾಕ್ ನೀಡಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…