ಬೆಂಗಳೂರು: ಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು, ಶೃಂಗೇರಿ ಹಾಗೂ ತಾಲ್ಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿ ರಾಜೇಗೌಡರ ಮನೆ ಮತ್ತು ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಶಾಸಕರು, ಹಾಗೂ ಅವರ ಪತ್ನಿ ಪುಷ್ಬ ಸೇರಿದಂತೆ ಕೆಲವು ಕುಟುಂಬದ ಸದಸ್ಯರು ಮನೆಯಲ್ಲೇ ಇದ್ದರು ಎನ್ನಲಾಗಿದೆ.
ಇದನ್ನು ಓದಿ : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ
ನ್ಯಾಯಾಲಯದ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದಾರೆ. ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
2 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಟಿ.ಡಿ.ರಾಜೇಗೌಡ ಅವರು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್ನಲ್ಲಿ ಸರಿಯಾದ ಆಸ್ತಿ ಘೋಷಣೆ ಮಾಡಿಲ್ಲ ಎನ್ನುವ ಬಗ್ಗೆ ದೂರು ದಾಖಲಿಸಿತ್ತು. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ದೂರು ನೀಡಿದ್ದರು.
ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೂಚನೆಯಂತೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…