ರಾಜ್ಯ

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರು, ಶೃಂಗೇರಿ ಹಾಗೂ ತಾಲ್ಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿ ರಾಜೇಗೌಡರ ಮನೆ ಮತ್ತು ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಶಾಸಕರು, ಹಾಗೂ ಅವರ ಪತ್ನಿ ಪುಷ್ಬ ಸೇರಿದಂತೆ ಕೆಲವು ಕುಟುಂಬದ ಸದಸ್ಯರು ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಇದನ್ನು ಓದಿ  : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ

ನ್ಯಾಯಾಲಯದ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದಾರೆ. ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.

2 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಟಿ.ಡಿ.ರಾಜೇಗೌಡ ಅವರು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‍ನಲ್ಲಿ ಸರಿಯಾದ ಆಸ್ತಿ ಘೋಷಣೆ ಮಾಡಿಲ್ಲ ಎನ್ನುವ ಬಗ್ಗೆ ದೂರು ದಾಖಲಿಸಿತ್ತು. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ದೂರು ನೀಡಿದ್ದರು.

ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೂಚನೆಯಂತೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

6 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

7 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

7 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

7 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago