ರಾಜ್ಯ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ; ಅಧಿಕಾರಿಗಳ ಮನೆ,ಕಚೇರಿ ತೀವ್ರ ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ. ಕಾನೂನು ಮಾಪನಶಾಸ್ತ್ರದ ಇನ್ಸ್ಪೆಕ್ಟರ್ ಎಚ್.ಆರ್.ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ದಾಳಿಗೊಳಗಾದ ಅಧಿಕಾರಿಗಳ ವಿವರ
1. ತುಮಕೂರು, ರಾಜಶೇಖರ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ
2. ಮಂಗಳೂರು: ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದಕ್ಷಿಣ ಕನ್ನಡ
3. ವಿಜಯಪುರ : ಶ್ರೀಮತಿ ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
4. ಬೆಂಗಳೂರು ನಗರ : ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ.
5. ಬೆಂಗಳೂರು: ಎಚ್ ಆರ್ ನಟರಾಜ್, ಇನ್ಸ್‍ಪೆಕ್ಟರ್, ಕಾನೂನು ಮಾಪನಶಾಸ್ತ್ರ
6. ಬೆಂಗಳೂರು ಗ್ರಾಮಾಂತರ, ಅನಂತ್ ಕುಮಾರ್ , ಹೊಸಕೋಟೆ ತಾಲೂಕು ಕಛೇರಿ
7. ಯಾದಗಿರಿ: ಉಮಾಕಾಂತ್, ಶಹಾಪುರ ತಾಲೂಕು, ಯಾದಗಿರಿ

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

38 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

59 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago