ರಾಜ್ಯ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ; ಅಧಿಕಾರಿಗಳ ಮನೆ,ಕಚೇರಿ ತೀವ್ರ ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ. ಕಾನೂನು ಮಾಪನಶಾಸ್ತ್ರದ ಇನ್ಸ್ಪೆಕ್ಟರ್ ಎಚ್.ಆರ್.ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ದಾಳಿಗೊಳಗಾದ ಅಧಿಕಾರಿಗಳ ವಿವರ
1. ತುಮಕೂರು, ರಾಜಶೇಖರ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ
2. ಮಂಗಳೂರು: ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದಕ್ಷಿಣ ಕನ್ನಡ
3. ವಿಜಯಪುರ : ಶ್ರೀಮತಿ ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
4. ಬೆಂಗಳೂರು ನಗರ : ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ.
5. ಬೆಂಗಳೂರು: ಎಚ್ ಆರ್ ನಟರಾಜ್, ಇನ್ಸ್‍ಪೆಕ್ಟರ್, ಕಾನೂನು ಮಾಪನಶಾಸ್ತ್ರ
6. ಬೆಂಗಳೂರು ಗ್ರಾಮಾಂತರ, ಅನಂತ್ ಕುಮಾರ್ , ಹೊಸಕೋಟೆ ತಾಲೂಕು ಕಛೇರಿ
7. ಯಾದಗಿರಿ: ಉಮಾಕಾಂತ್, ಶಹಾಪುರ ತಾಲೂಕು, ಯಾದಗಿರಿ

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago