ಬೆಂಗಳೂರು : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ.
ರಾಜ್ಯದ ೩೦ ಕಡೆ ಒಟ್ಟು ನೂರಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ತುಮಕೂರಿನ ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕರು ಬಲವಂತ್ ರಾಥೋಡ್, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ ರಾಜಾ. ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್, ಹಾಗೂ ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿಎಲ್, ಬೆಂಗಳೂರು ಉತ್ತರಉಪವಿಭಾಗದ ಎಫ್ ಡಿಎಟಿಆರ್ ಮಂಜುನಾಥ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…