ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್ ಕೇಳಿ ವಾಪಸ್ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರೆಜೆಕ್ಟ್ ಆಗುವುದಿಲ್ಲ ಎಂದರು.
ಇನ್ನು ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನೆ ಇರಲು ಬಯಸುವುದಿಲ್ಲ. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು ಎಂದು ಹೇಳಿದರು.
ಇನ್ನು ಮುಡಾ ವಿಚಾರದಿಂದ ಸಿಎಂ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಯಾವುದೇ ಆತಂಕದಲ್ಲಿಲ್ಲ. ಎಲ್ಲಾ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ಸಿಎಂ ಆಗಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…