ರಾಜ್ಯ

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್‌ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್‌ ಕೇಳಿ ವಾಪಸ್‌ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರೆಜೆಕ್ಟ್‌ ಆಗುವುದಿಲ್ಲ ಎಂದರು.

ಇನ್ನು ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್‌ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನೆ ಇರಲು ಬಯಸುವುದಿಲ್ಲ. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು ಎಂದು ಹೇಳಿದರು.

ಇನ್ನು ಮುಡಾ ವಿಚಾರದಿಂದ ಸಿಎಂ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಯಾವುದೇ ಆತಂಕದಲ್ಲಿಲ್ಲ. ಎಲ್ಲಾ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ಸಿಎಂ ಆಗಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago