ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್ ಕೇಳಿ ವಾಪಸ್ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರೆಜೆಕ್ಟ್ ಆಗುವುದಿಲ್ಲ ಎಂದರು.
ಇನ್ನು ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನೆ ಇರಲು ಬಯಸುವುದಿಲ್ಲ. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು ಎಂದು ಹೇಳಿದರು.
ಇನ್ನು ಮುಡಾ ವಿಚಾರದಿಂದ ಸಿಎಂ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಯಾವುದೇ ಆತಂಕದಲ್ಲಿಲ್ಲ. ಎಲ್ಲಾ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ಸಿಎಂ ಆಗಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…