ರಾಜ್ಯ

Loksabha Election Results 2024: ಕರ್ನಾಟಕದ ಮತ ಎಣಿಕೆ ಕೇಂದ್ರದಲ್ಲಿ ಹಲವು ಎಡವಟ್ಟು, ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ ಇಲ್ಲಿದೆ.

ಸ್ಟ್ರಾಂಗ್‌ ರೊಂ ಕೀ ಮರೆತು ಬಂದ ಅಧಿಕಾರಿ
ವಿಜಯಪುರಲ್ಲಿ ಸ್ಟ್ರಾಂಗ್‌ ರೊಂ ಓಪನ್‌ ವೇಳೆ ಅಧಿಕಾರಿ ಪೇಚಿಗೆ ಸಿಲುಕಿದ್ದಾರೆ. ವಿಜಯಪುರ ಲೋಕಸಭಾ ಚುನಾವಣೆ ಮತ ಎಣಿಕೆಯ ಅಧಿಕಾರಿ ಸ್ಟ್ರಾಂಗ್‌ ರೊಂ ಕೀಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದಾರೆ. ಬಳಿಕ ಕೀ ತರಲು ಮನೆಗೆ ಹೋಗಿ ತಡವಾಗಿ ಕೀ ತಂದಿದ್ದಾರೆ

ಮೊಬೈಲ್‌ಗಾಗಿ ಏಜೆಂಟ್‌ ಹಾಗೂ ಪೊಲೀಸರ ಮಧ್ಯೆ ವಾಗ್ವಾದ
ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗಲು ಚುನಾವಣಾ ಏಜೆಂಟ್‌ಗಳಿಗೆ ಅವಕಾಶವಿದ್ದರೂ ಪೊಲೀಸರು ತಡೆದರು. ಈ ವೇಳೆ ಪೋಲಿಸ್‌ ಹಾಗೂ ಏಜೆಂಟರ ನಡುವೆ ವಾಗ್ವಾದ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಪೊಲೀಸ್‌ ಆಯುಕ್ತು ಸ್ಥಳಕ್ಕೆ ಬಂದು ಮನವೊಲಿಕೆ ಮಾಡಿದರು.

ಎಣಿಕೆ ಕೇಂದ್ರದಲ್ಲಿಯೂ ಕೇಸರಿ ಶಾಲು ಪ್ರದರ್ಶನ
ಬೀದರ್‌ನಲ್ಲಿ ಬಿಜೆಪಿ ಏಜೆಂಟ್‌ಗಳು ಮತ ಎಣಿಕೆ ಕೇಂದ್ರಕ್ಕೆ ಕೇಸರು ಸಾಲು ಧರಿಸಿಕೊಂಡು ಬಂದರು. ಈ ವೇಳೆ ಬಿಜೆಪಿ ಏಟೆಂಜರು ಶಕ್ತಿ ಪ್ರದರ್ಶಿಸಿದರು. ಇದರಿಂದ ಕೆಲಕಾಲ ಗೊಂದಲವು ಉಂಟಾಗಿತ್ತು.

ವರುಣಾದಲ್ಲಿ ಕೈಕೊಟ್ಟ ಮತ ಯೂನಿಟ್‌
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವರುಣಾದಲ್ಲಿ 1 ನೇ ಯೂನಿಟ್‌ ತಾಂತ್ರಿಕ ಕಾರಣದಿಂದ ಕೈಕೊಟ್ಟಿದ್ದು, ಇದರಿಂದ ಮತ ಎಣಿಕೆ ಕಾರ್ಯ ವಿಳಂಬವಾಯಿತು.

ಮತ ಎಣಿಕೆ ಅಧಿಕಾರಿ ಅಸ್ವಸ್ಥ
ವಿಜಯಪುರದಲ್ಲಿ ಮತ ಎಣಿಕೆ ವೇಳೆ ಅಧಿಕಾರಿ ಅಸ್ವಸ್ಥಗೊಂಡರು. ಮತ ಎಣಿಕೆ ಸೂಪರ್‌ವೈಸರ್‌ ಸಿದ್ದರಾಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಇವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು.

ಮತ ಎಣಿಕೆ ಕೇಂದ್ರದಲ್ಲಿ ಏಜೆಂಟ್‌ಗಳಿಗೆ ಕುರ್ಚಿ ಕೊರತೆ
ರಾಯಚೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಏಜೆಂಟರುಗಳಿಗೆ ಕುರ್ಚಿ ಕೊರತೆ ಉಂಟಾಗಿದ್ದು, ಏಜೆಂಟರು ಕುಳಿತುಕೊಳ್ಳಲು ಚೇರ್‌ ಇಲ್ಲದೇ, ಅಂಚೆ ಮತದಾನ ಎಣಿಕೆ ವಿಳಂಬವಾಗಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

1 hour ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

1 hour ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

1 hour ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

2 hours ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

4 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

4 hours ago