ರಾಜ್ಯ

Loksabha Election Results 2024: ಕರ್ನಾಟಕದ ಮತ ಎಣಿಕೆ ಕೇಂದ್ರದಲ್ಲಿ ಹಲವು ಎಡವಟ್ಟು, ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ ಇಲ್ಲಿದೆ.

ಸ್ಟ್ರಾಂಗ್‌ ರೊಂ ಕೀ ಮರೆತು ಬಂದ ಅಧಿಕಾರಿ
ವಿಜಯಪುರಲ್ಲಿ ಸ್ಟ್ರಾಂಗ್‌ ರೊಂ ಓಪನ್‌ ವೇಳೆ ಅಧಿಕಾರಿ ಪೇಚಿಗೆ ಸಿಲುಕಿದ್ದಾರೆ. ವಿಜಯಪುರ ಲೋಕಸಭಾ ಚುನಾವಣೆ ಮತ ಎಣಿಕೆಯ ಅಧಿಕಾರಿ ಸ್ಟ್ರಾಂಗ್‌ ರೊಂ ಕೀಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದಾರೆ. ಬಳಿಕ ಕೀ ತರಲು ಮನೆಗೆ ಹೋಗಿ ತಡವಾಗಿ ಕೀ ತಂದಿದ್ದಾರೆ

ಮೊಬೈಲ್‌ಗಾಗಿ ಏಜೆಂಟ್‌ ಹಾಗೂ ಪೊಲೀಸರ ಮಧ್ಯೆ ವಾಗ್ವಾದ
ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗಲು ಚುನಾವಣಾ ಏಜೆಂಟ್‌ಗಳಿಗೆ ಅವಕಾಶವಿದ್ದರೂ ಪೊಲೀಸರು ತಡೆದರು. ಈ ವೇಳೆ ಪೋಲಿಸ್‌ ಹಾಗೂ ಏಜೆಂಟರ ನಡುವೆ ವಾಗ್ವಾದ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಪೊಲೀಸ್‌ ಆಯುಕ್ತು ಸ್ಥಳಕ್ಕೆ ಬಂದು ಮನವೊಲಿಕೆ ಮಾಡಿದರು.

ಎಣಿಕೆ ಕೇಂದ್ರದಲ್ಲಿಯೂ ಕೇಸರಿ ಶಾಲು ಪ್ರದರ್ಶನ
ಬೀದರ್‌ನಲ್ಲಿ ಬಿಜೆಪಿ ಏಜೆಂಟ್‌ಗಳು ಮತ ಎಣಿಕೆ ಕೇಂದ್ರಕ್ಕೆ ಕೇಸರು ಸಾಲು ಧರಿಸಿಕೊಂಡು ಬಂದರು. ಈ ವೇಳೆ ಬಿಜೆಪಿ ಏಟೆಂಜರು ಶಕ್ತಿ ಪ್ರದರ್ಶಿಸಿದರು. ಇದರಿಂದ ಕೆಲಕಾಲ ಗೊಂದಲವು ಉಂಟಾಗಿತ್ತು.

ವರುಣಾದಲ್ಲಿ ಕೈಕೊಟ್ಟ ಮತ ಯೂನಿಟ್‌
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವರುಣಾದಲ್ಲಿ 1 ನೇ ಯೂನಿಟ್‌ ತಾಂತ್ರಿಕ ಕಾರಣದಿಂದ ಕೈಕೊಟ್ಟಿದ್ದು, ಇದರಿಂದ ಮತ ಎಣಿಕೆ ಕಾರ್ಯ ವಿಳಂಬವಾಯಿತು.

ಮತ ಎಣಿಕೆ ಅಧಿಕಾರಿ ಅಸ್ವಸ್ಥ
ವಿಜಯಪುರದಲ್ಲಿ ಮತ ಎಣಿಕೆ ವೇಳೆ ಅಧಿಕಾರಿ ಅಸ್ವಸ್ಥಗೊಂಡರು. ಮತ ಎಣಿಕೆ ಸೂಪರ್‌ವೈಸರ್‌ ಸಿದ್ದರಾಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಇವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು.

ಮತ ಎಣಿಕೆ ಕೇಂದ್ರದಲ್ಲಿ ಏಜೆಂಟ್‌ಗಳಿಗೆ ಕುರ್ಚಿ ಕೊರತೆ
ರಾಯಚೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಏಜೆಂಟರುಗಳಿಗೆ ಕುರ್ಚಿ ಕೊರತೆ ಉಂಟಾಗಿದ್ದು, ಏಜೆಂಟರು ಕುಳಿತುಕೊಳ್ಳಲು ಚೇರ್‌ ಇಲ್ಲದೇ, ಅಂಚೆ ಮತದಾನ ಎಣಿಕೆ ವಿಳಂಬವಾಗಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

6 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

7 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago