ರಾಜ್ಯ

Loksabha Election Results 2024: ಕರ್ನಾಟಕದ ಮತ ಎಣಿಕೆ ಕೇಂದ್ರದಲ್ಲಿ ಹಲವು ಎಡವಟ್ಟು, ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ ಇಲ್ಲಿದೆ.

ಸ್ಟ್ರಾಂಗ್‌ ರೊಂ ಕೀ ಮರೆತು ಬಂದ ಅಧಿಕಾರಿ
ವಿಜಯಪುರಲ್ಲಿ ಸ್ಟ್ರಾಂಗ್‌ ರೊಂ ಓಪನ್‌ ವೇಳೆ ಅಧಿಕಾರಿ ಪೇಚಿಗೆ ಸಿಲುಕಿದ್ದಾರೆ. ವಿಜಯಪುರ ಲೋಕಸಭಾ ಚುನಾವಣೆ ಮತ ಎಣಿಕೆಯ ಅಧಿಕಾರಿ ಸ್ಟ್ರಾಂಗ್‌ ರೊಂ ಕೀಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದಾರೆ. ಬಳಿಕ ಕೀ ತರಲು ಮನೆಗೆ ಹೋಗಿ ತಡವಾಗಿ ಕೀ ತಂದಿದ್ದಾರೆ

ಮೊಬೈಲ್‌ಗಾಗಿ ಏಜೆಂಟ್‌ ಹಾಗೂ ಪೊಲೀಸರ ಮಧ್ಯೆ ವಾಗ್ವಾದ
ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗಲು ಚುನಾವಣಾ ಏಜೆಂಟ್‌ಗಳಿಗೆ ಅವಕಾಶವಿದ್ದರೂ ಪೊಲೀಸರು ತಡೆದರು. ಈ ವೇಳೆ ಪೋಲಿಸ್‌ ಹಾಗೂ ಏಜೆಂಟರ ನಡುವೆ ವಾಗ್ವಾದ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಪೊಲೀಸ್‌ ಆಯುಕ್ತು ಸ್ಥಳಕ್ಕೆ ಬಂದು ಮನವೊಲಿಕೆ ಮಾಡಿದರು.

ಎಣಿಕೆ ಕೇಂದ್ರದಲ್ಲಿಯೂ ಕೇಸರಿ ಶಾಲು ಪ್ರದರ್ಶನ
ಬೀದರ್‌ನಲ್ಲಿ ಬಿಜೆಪಿ ಏಜೆಂಟ್‌ಗಳು ಮತ ಎಣಿಕೆ ಕೇಂದ್ರಕ್ಕೆ ಕೇಸರು ಸಾಲು ಧರಿಸಿಕೊಂಡು ಬಂದರು. ಈ ವೇಳೆ ಬಿಜೆಪಿ ಏಟೆಂಜರು ಶಕ್ತಿ ಪ್ರದರ್ಶಿಸಿದರು. ಇದರಿಂದ ಕೆಲಕಾಲ ಗೊಂದಲವು ಉಂಟಾಗಿತ್ತು.

ವರುಣಾದಲ್ಲಿ ಕೈಕೊಟ್ಟ ಮತ ಯೂನಿಟ್‌
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವರುಣಾದಲ್ಲಿ 1 ನೇ ಯೂನಿಟ್‌ ತಾಂತ್ರಿಕ ಕಾರಣದಿಂದ ಕೈಕೊಟ್ಟಿದ್ದು, ಇದರಿಂದ ಮತ ಎಣಿಕೆ ಕಾರ್ಯ ವಿಳಂಬವಾಯಿತು.

ಮತ ಎಣಿಕೆ ಅಧಿಕಾರಿ ಅಸ್ವಸ್ಥ
ವಿಜಯಪುರದಲ್ಲಿ ಮತ ಎಣಿಕೆ ವೇಳೆ ಅಧಿಕಾರಿ ಅಸ್ವಸ್ಥಗೊಂಡರು. ಮತ ಎಣಿಕೆ ಸೂಪರ್‌ವೈಸರ್‌ ಸಿದ್ದರಾಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಇವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು.

ಮತ ಎಣಿಕೆ ಕೇಂದ್ರದಲ್ಲಿ ಏಜೆಂಟ್‌ಗಳಿಗೆ ಕುರ್ಚಿ ಕೊರತೆ
ರಾಯಚೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಏಜೆಂಟರುಗಳಿಗೆ ಕುರ್ಚಿ ಕೊರತೆ ಉಂಟಾಗಿದ್ದು, ಏಜೆಂಟರು ಕುಳಿತುಕೊಳ್ಳಲು ಚೇರ್‌ ಇಲ್ಲದೇ, ಅಂಚೆ ಮತದಾನ ಎಣಿಕೆ ವಿಳಂಬವಾಗಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

51 mins ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

60 mins ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

1 hour ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

3 hours ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

14 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

17 hours ago