ರಾಜ್ಯ

ಲೋಕಸಭಾ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ರಿಲೀಸ್‌; ಮೈಸೂರಿಗೆ ಯದುವೀರ್‌ ಅಭ್ಯರ್ಥಿ!

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಪಕ್ಷವು ರಾಜ್ಯದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಪ್ರಕಟ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 72 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದ್ದು, ಮೈಸೂರಿಗೆ ಅಚ್ಚರಿಯ ಆಯ್ಕೆಯಂತೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಟಿಕೆಟ್‌ ನೀಡಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈ ತಪ್ಪಿದೆ.

ರಾಜ್ಯದ 20 ಕ್ಷೇತ್ರಗಳಿಗೆ ಕಮಲ ಕಲಿಗಳ ಘೋಷಣೆಯಾಗಿದ್ದು, ನಿರೀಕ್ಷೆಯಂತೆ ಕೆಲ ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ.‌ ಅಚ್ಚರಿ ಬೆಳವಣಿಗೆಯಲ್ಲಿ ಚಾಮರಾಜನಗರದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಳಿಯನಿಗೂ ಟಿಕೆಟ್‌ ಕೈ ತಪ್ಪಿದ್ದು, ಎಸ್‌. ಬಾಲರಾಜ್‌ ಅವರ ಪರ ಕೇಂದ್ರ ಬ್ಯಾಟ್‌ ಬೀಸಿದೆ. ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಯನ್ನಾಗಿಸಿದರೆ, ಡಾ. ಮಂಜುನಾಥ್‌ ಅವರನ್ನು ಬೆಂಗಳೂರು ಗ್ರಾಮಾಂತರದಿಂದ ಕಣಕ್ಕಿಳಿಸಲು ಬಿಜೆಪಿ ಹೈ ಕಮಾಂಡ್‌ ಮುಂದಾಗಿದೆ.

ರಾಜ್ಯದ 20 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ.

ಚಿಕ್ಕೋಡಿ – ಅಣ್ಣಸಾಹೇಬ್ ಶಂಕರ್ ಜೊಲ್ಲೆ ,

ಬಾಗಲಕೋಟೆ – ಪಿಸಿ ಗಡ್ಡಿಗೌಡರ್

ಬಿಜಾಪುರ – ರಮೇಶ್ ಜಿಗಿಜಿಣಗಿ ,

ಗುಲ್ಬರ್ಗ – ಉಮೇಶ್ ಜಾದವ್ ,

ಬೀದರ್ – ಭಗವತ್ ಖುಬಾ ,

ಕೊಪ್ಪಳ – ಬಸವರಾಜ್ ಕ್ಯಾವತೋರ್

ಬಳ್ಳಾರಿ – ಬಿ ಶ್ರೀರಾಮುಲು

ಹಾವೇರಿ – ಬಸವರಾಜ್ ಬೊಮ್ಮಾಯಿ

ಧಾರವಾಡ – ಪ್ರಹ್ಲಾದ್ ಜೋಶಿ

ದಾವಣಗೆರೆ – ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ – ಬಿ ವೈ ರಾಘವೇಂದ್ರ

ಉಡುಪಿ ಚಿಕ್ಕಮಗಳೂರು – ಕೋಟಾ ಶ್ರೀನಿವಾಸ್ ಪೂಜಾರಿ

ದಕ್ಷಿಣ ಕನ್ನಡ – ಬ್ರಿಜೇಶ್ ಚೌಟಾ

ತುಮಕೂರು – ವಿ ಸೋಮಣ್ಣ

ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್

ಚಾಮರಾಜನಗರ – ಎಸ್ ಬಾಲರಾಜ್

ಬೆಂಗಳೂರು ಗ್ರಾಮಾಂತರ – ಡಾ ಸಿ.ಎನ್ ಮಂಜುನಾಥ್

ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ

ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ

ಬೆಂಗಳೂರು ಸೆಂಟ್ರಲ್ – ಪಿಸಿ ಮೋಹನ್

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago