ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ.
ಮಾರ್ಚ್ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 ದಿನಗಳಷ್ಟೆ. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 406.73 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜೊತೆಗೆ ರಾಜ್ಯದಲ್ಲಿ ಈವರೆಗೆ ಯಾವುದೇ ಲೋಕಸಭಾ ಚುನಾವಣೆಯಲ್ಲಿ ಜಪ್ತಿ ಮಾಡದಷ್ಟು ಹಣ, ಹೆಂಡ, ಉಡುಗೊರೆ ಹಾಗೂ ಚಿನ್ನವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.
ಜಪ್ತಿಯಾಗಿರುವ ನಗದು, ಮದ್ಯದ ಪೈಕಿ, 78 ಕೋಟಿ ರೂ ನಗದು, 177 ಕೋಟಿ ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಮದ್ಯ ಜಪ್ತಿ ಇದಾಗಿದೆ. ಈ ಮೂಲಕ ದೇಶದಲ್ಲಿಯೇ ಮದ್ಯ ಜಪ್ತಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಉಳಿದಂತೆ 11.21 ಕೋಟಿ ರೂ. ಮೌಲ್ಯದ ಮಾದಕ ವಸ್ತು, 8.14 ಕೋಟಿ ರೂ. ಮೌಲ್ಯದ ಉಡುಗೊರೆ, 59 ಕೋಟಿ ರೂ. ಮೌಲ್ಯದ ಬೆಳ್ಳಿ ಬಂಗಾರ ಹಾಗೂ ಡೈಮೆಂಡ್, 72 ಕೋಟಿ ರೂ.ಮೌಲ್ಯದ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ನೀತಿ ಸಂಹಿತೆ ಜಾರಿಯಾದಾಗಿನಿಂದ ಕೋಟ್ಯಂತರ ರೂಪಾಯಿ ಹಣ ಜೊತೆ ದೇಶದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮದ್ಯ ವಶಪಡಿಸಿಕೊಂಡಿರುವುದು ದಾಖಲೆ ಸೃಷ್ಠಿಯಾಗಿದೆ. ಇದು ಚುನಾವಣಾ ಅಧಿಕಾರಿಗಳಿಗೂ ಅಚ್ಚರಿಯ ಸಂಗತಿಯಾಗಿದೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…