ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ.
ಮಾರ್ಚ್ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 ದಿನಗಳಷ್ಟೆ. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 406.73 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜೊತೆಗೆ ರಾಜ್ಯದಲ್ಲಿ ಈವರೆಗೆ ಯಾವುದೇ ಲೋಕಸಭಾ ಚುನಾವಣೆಯಲ್ಲಿ ಜಪ್ತಿ ಮಾಡದಷ್ಟು ಹಣ, ಹೆಂಡ, ಉಡುಗೊರೆ ಹಾಗೂ ಚಿನ್ನವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.
ಜಪ್ತಿಯಾಗಿರುವ ನಗದು, ಮದ್ಯದ ಪೈಕಿ, 78 ಕೋಟಿ ರೂ ನಗದು, 177 ಕೋಟಿ ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಮದ್ಯ ಜಪ್ತಿ ಇದಾಗಿದೆ. ಈ ಮೂಲಕ ದೇಶದಲ್ಲಿಯೇ ಮದ್ಯ ಜಪ್ತಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಉಳಿದಂತೆ 11.21 ಕೋಟಿ ರೂ. ಮೌಲ್ಯದ ಮಾದಕ ವಸ್ತು, 8.14 ಕೋಟಿ ರೂ. ಮೌಲ್ಯದ ಉಡುಗೊರೆ, 59 ಕೋಟಿ ರೂ. ಮೌಲ್ಯದ ಬೆಳ್ಳಿ ಬಂಗಾರ ಹಾಗೂ ಡೈಮೆಂಡ್, 72 ಕೋಟಿ ರೂ.ಮೌಲ್ಯದ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ನೀತಿ ಸಂಹಿತೆ ಜಾರಿಯಾದಾಗಿನಿಂದ ಕೋಟ್ಯಂತರ ರೂಪಾಯಿ ಹಣ ಜೊತೆ ದೇಶದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮದ್ಯ ವಶಪಡಿಸಿಕೊಂಡಿರುವುದು ದಾಖಲೆ ಸೃಷ್ಠಿಯಾಗಿದೆ. ಇದು ಚುನಾವಣಾ ಅಧಿಕಾರಿಗಳಿಗೂ ಅಚ್ಚರಿಯ ಸಂಗತಿಯಾಗಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…