ರಾಜ್ಯ

ರಾಜ್ಯದ 14 ಕ್ಷೇತ್ರಗಳಲ್ಲಿ ‌ಬಹುತೇಕ ಶಾಂತಿಯುತ ಮತದಾನ: ಎಡಿಜಿಪಿ

ಬೆಂಗಳೂರು: ಶುಕ್ರವಾರ (ಏ.26 ) ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಮೊದಲ ಹಂತದ ಮತದಾನ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ‌ಶಾಂತಿಯುತ ಮತದಾನ ನಡೆದಿದೆ, ಯಾವುದೇ ತರಹದ ಅಹಿತಕರ ಘಟನೆ ನಡೆದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ‌‌ ಆರ್.ಜಿತೇಂದ್ರ ತಿಳಿಸಿದ್ದಾರೆ.

ಈ ಕುರಿತು ಖಾಸಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ‌ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ಕೆಲವು ಕಡೆ ಇವಿಎಂ ಟೆಕ್ನಿಕಲ್ ಸಮಸ್ಯೆ ಕಂಡುಬಂತು, ಕೆಲಗಂಟೆ ಮತದಾನ ಸ್ಥಗಿತವಾಗಿತ್ತು, ಉಳಿದಂತೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನ ಇಂಡಿಗನತ್ತ ಮತಗಟ್ಟೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿದೆ. ಜೊತೆಗೆ ಮತದಾನ ಬಹಿಷ್ಕಾರಕ್ಕೆ ಗಲಾಟೆಗಳಾಗಿವೆ. ಗ್ರಾಮಕ್ಕೆ ಹೆಚ್ಚುವರಿ ಭದ್ರತೆ ನೀಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂದಿನ ಪ್ರಕ್ರಿಯೆ ಬಗ್ಗೆ ಜಿಲ್ಲಾ‌ ಚುನಾವಣಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದರು.

ರಾಜ್ಯದ 14 ಕ್ಷೇತ್ರಗಳಲ್ಲಿ 75 ಸಿಆರ್ ಪಿಎಫ್, 35 ಸಾವಿರ ಪೊಲೀಸರು, 17 ಸಾವಿರ ಹೋಮ್ ಗಾರ್ಡ್ಸ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಮತದಾನ ಮುಗಿದ ಬಳಿಕ ಎಲ್ಲಾ ಕ್ಷೇತ್ರಗಳ ಇವಿಎಂಗಳು ಮಸ್ಟರಿಂಗ್ ಕೇಂದ್ರದಲ್ಲಿ ಭದ್ರವಾಗಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಇವಿಎಂಗಳು ಭದ್ರವಾಗಿವೆ ಎಂದು ಮಾಹಿತಿ ನೀಡಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

13 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

14 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago