ಬೆಂಗಳೂರು: ಶುಕ್ರವಾರ (ಏ.26 ) ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಮೊದಲ ಹಂತದ ಮತದಾನ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಶಾಂತಿಯುತ ಮತದಾನ ನಡೆದಿದೆ, ಯಾವುದೇ ತರಹದ ಅಹಿತಕರ ಘಟನೆ ನಡೆದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಜಿತೇಂದ್ರ ತಿಳಿಸಿದ್ದಾರೆ.
ಈ ಕುರಿತು ಖಾಸಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ಕೆಲವು ಕಡೆ ಇವಿಎಂ ಟೆಕ್ನಿಕಲ್ ಸಮಸ್ಯೆ ಕಂಡುಬಂತು, ಕೆಲಗಂಟೆ ಮತದಾನ ಸ್ಥಗಿತವಾಗಿತ್ತು, ಉಳಿದಂತೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನ ಇಂಡಿಗನತ್ತ ಮತಗಟ್ಟೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿದೆ. ಜೊತೆಗೆ ಮತದಾನ ಬಹಿಷ್ಕಾರಕ್ಕೆ ಗಲಾಟೆಗಳಾಗಿವೆ. ಗ್ರಾಮಕ್ಕೆ ಹೆಚ್ಚುವರಿ ಭದ್ರತೆ ನೀಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂದಿನ ಪ್ರಕ್ರಿಯೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದರು.
ರಾಜ್ಯದ 14 ಕ್ಷೇತ್ರಗಳಲ್ಲಿ 75 ಸಿಆರ್ ಪಿಎಫ್, 35 ಸಾವಿರ ಪೊಲೀಸರು, 17 ಸಾವಿರ ಹೋಮ್ ಗಾರ್ಡ್ಸ್ಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಮತದಾನ ಮುಗಿದ ಬಳಿಕ ಎಲ್ಲಾ ಕ್ಷೇತ್ರಗಳ ಇವಿಎಂಗಳು ಮಸ್ಟರಿಂಗ್ ಕೇಂದ್ರದಲ್ಲಿ ಭದ್ರವಾಗಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಇವಿಎಂಗಳು ಭದ್ರವಾಗಿವೆ ಎಂದು ಮಾಹಿತಿ ನೀಡಿದರು.
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…