ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಸೋದರ ಡಿಕೆ ಸುರೇಶ್ ಪರ ಮತಪ್ರಚಾರ ಮಾಡುವ ವೇಳೆ ಅಪಾರ್ಟ್ಮೆಂಟ್ ಒಂದರ ಜನರ ಜತೆ ಸಭೆ ನಡೆಸಿ ಮಾತನಾಡಿದ್ದ ಡಿಕೆಶಿ ತನ್ನ ಸಹೋದರನಿಗೆ ಮತ ಹಾಕಿದರೆ ನಿಮ್ಮ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವುದಾಗಿ ಹೇಳಿದ್ದರು ಎಂದು ಬಿಜೆಪಿ ದೂರು ದಾಖಲಿಸಿತ್ತು.
ಈ ಕುರಿತಾಗಿ ಇದೀಗ ಹೈಕೋರ್ಟ್ ಆದೇಶ ನೀಡಿದ್ದು, ಡಿಕೆ ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಾಡಿದರು.
ಇನ್ನು ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ವಕೀಲ ಶರತ್ ದೊಡ್ಡವಾಡ್ ಡಿಕೆಶಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ವಾದ ಮಂಡಿಸಿದರು. ಇದನ್ನಾಲಿಸಿದ ಹೈಕೋರ್ಟ್ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಕಳವಳ ವ್ಯಕ್ತಪಡಿಸಿತು.
ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳರಿಗೆ ಕೋರ್ಟ್ ಸೂಚನೆ ನೀಡಿತು. ಅಲ್ಲದೇ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆಯನ್ನೂ ಸಹ ನ್ಯಾ.ಕೃಷ್ಣ ಎಸ್ ದೀಕ್ಷಿತ್ ಇದ್ದ ಪೀಠ ಇದೇ ವೇಳೆ ನೀಡಿತು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…