ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ಮತಯಾಚನೆ ಮಾಡುವ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರ್ ಆರ್ ನಗರದ ಅಪಾರ್ಟ್ಮೆಂಟ್ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡುವ ವೇಳೆ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ನಾನು ಇಲ್ಲಿಗೆ ವ್ಯಾವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್ನಲ್ಲಿ 2510 ಮನೆಗಳಿದ್ದು, 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು ಸಂಪರ್ಕ ದೊರೆಯದಿರುವುದು. ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ, ನಿಮ್ಮ ಬೂತ್ ಆರ್ ಆರ್ ನಗರದಲ್ಲಿದೆ. 2 ರಿಂದ 3 ಬೂತ್ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ ಎಂದು ಡಿಕೆ ಶಿವಕುಮಾರ್ ಹೇಳುತ್ತಿರುವ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿತ್ತು. ಈ ಹಿನ್ನಲೆ ದೂರು ದಾಖಲಾಗಿತ್ತು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…