ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ ಕಳೆದ ಬಾರಿಯ ಬಿಜೆಪಿ ಪ್ರಣಾಳಿಕೆಯಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ ಎನ್ನುವ ಲೆಕ್ಕಚಾರವನ್ನು ದೇಶದ ಜನತೆಯ ಮುಂದಿಡಿ ಮೋದಿ ಅವರೇ ಎಂದು ಸವಾಲು ಹಾಕಿದ್ದಾರೆ.
ಮೋದಿ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಕಿಡಿಕಾರಿದ ಸಿದ್ದರಾಮಯ್ಯ, ನಾನು ನುಡಿದಂತೆ ನಡೆದವನು. ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಮಾಡಿದ ಕೆಲಸದ ಲೆಕ್ಕವನ್ನು ಜನರ ಮುಂದೆ ಇಟ್ಟಿದ್ದೆ. ಈ ಬಾರಿಯೂ ಈ ಕೆಲಸ ಮುಂದುವರೆಸುತ್ತಿದ್ದೇನೆ. ಈ ಕಾರಣಕ್ಕೆ ನರೇಂದ್ರ ಮೋದಿಯವರಲ್ಲಿ ಲೆಕ್ಕ ಕೇಳುವ ನೈತಿಕ ಅಧಿಕಾರ ನನಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ಜುಮ್ಲಾ(ಮೋದಿ ಸುಳ್ಳು ಭರವಸೆ)1 ಎಂದು ಸರಣಿಗಳನ್ನು ಆರಂಭಿಸಿ ಬಿಜೆಪಿ ಪ್ರಣಾಳಿಕೆಗಳು ಎಷ್ಟು ಸುಳ್ಳಿನಿಂದ ಕೂಡಿದೆ ಎಂದು ಎಳೆ ಎಳೆಯಾಗಿ ಬರೆದುಕೊಂಡಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…