ರಾಜ್ಯ

ಬಿಜೆಪಿ ಪ್ರಣಾಳಿಕೆಯಲ್ಲೂ ಚೊಂಬು ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಪೋಸ್ಟ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಕಳೆದ ಬಾರಿಯ ಬಿಜೆಪಿ ಪ್ರಣಾಳಿಕೆಯಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ ಎನ್ನುವ ಲೆಕ್ಕಚಾರವನ್ನು ದೇಶದ ಜನತೆಯ ಮುಂದಿಡಿ ಮೋದಿ ಅವರೇ ಎಂದು ಸವಾಲು ಹಾಕಿದ್ದಾರೆ.

ಮೋದಿ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಕಿಡಿಕಾರಿದ ಸಿದ್ದರಾಮಯ್ಯ, ನಾನು ನುಡಿದಂತೆ ನಡೆದವನು. ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಮಾಡಿದ ಕೆಲಸದ ಲೆಕ್ಕವನ್ನು ಜನರ ಮುಂದೆ ಇಟ್ಟಿದ್ದೆ. ಈ ಬಾರಿಯೂ ಈ ಕೆಲಸ ಮುಂದುವರೆಸುತ್ತಿದ್ದೇನೆ. ಈ ಕಾರಣಕ್ಕೆ ನರೇಂದ್ರ ಮೋದಿಯವರಲ್ಲಿ ಲೆಕ್ಕ ಕೇಳುವ ನೈತಿಕ ಅಧಿಕಾರ ನನಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಜುಮ್ಲಾ(ಮೋದಿ ಸುಳ್ಳು ಭರವಸೆ)1 ಎಂದು ಸರಣಿಗಳನ್ನು ಆರಂಭಿಸಿ ಬಿಜೆಪಿ ಪ್ರಣಾಳಿಕೆಗಳು ಎಷ್ಟು ಸುಳ್ಳಿನಿಂದ ಕೂಡಿದೆ ಎಂದು ಎಳೆ ಎಳೆಯಾಗಿ ಬರೆದುಕೊಂಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

2 seconds ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

30 mins ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

2 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

2 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

3 hours ago

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

7 hours ago