ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಅಂಬರೀಶ್ ಮೊದಲ ಪ್ರತಿಕ್ರಿಯೆ

ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಕ್ಷೇತ್ರದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಈ ಬಗ್ಗೆ ಇಂದು (ಏ.19) ಉಡುಪಿಯಲ್ಲಿ ಸುಮಲತಾ ಅಂಬರೀಶ್‌ ಪ್ರತಿಕ್ರಿಯಿಸಿದ್ದು, ʼಸುಮಲತಾ ಅವರೇ ದರ್ಶನ್ ಅವರನ್ನು ಪ್ರಚಾರಕ್ಕೆ ಕಳಿಸಿದ್ದಾರೆ ಎನ್ನುವುದು ಊಹಾಪೋಹ. ಇದರಲ್ಲಿ ಸೆನ್ಸ್ ಲಾಜಿಕ್ ಎರಡೂ ಇಲ್ಲ. ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ಯಾರ ಪರ ಪ್ರಚಾರ ಮಾಡಬೇಕು ಎನ್ನುವುದು ಅವರ ಇಚ್ಛೆ. ಹೋಗು ಹೋಗಬೇಡ ಎನ್ನಲು ನಾನು ಯಾರು? ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಹಾಗೆಯೇ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರಕ್ಕೆ ಹೋಗಿದ್ದರು. ಪಕ್ಷ ಮುಖ್ಯ ಅಲ್ಲ. ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆʼ ಎಂದು ಸುಮಲತಾ ಅಂಬರೀಶ್ ತಿಳಿಸಿದರು.

ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ʼನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಹೆಚ್ ಡಿಕೆ ಪರ ಪ್ರಚಾರ ಮಾಡುತ್ತೇನೆʼ ಎಂದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

2 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

3 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

3 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

3 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

14 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

14 hours ago