ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಕ್ಷೇತ್ರದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಈ ಬಗ್ಗೆ ಇಂದು (ಏ.19) ಉಡುಪಿಯಲ್ಲಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ʼಸುಮಲತಾ ಅವರೇ ದರ್ಶನ್ ಅವರನ್ನು ಪ್ರಚಾರಕ್ಕೆ ಕಳಿಸಿದ್ದಾರೆ ಎನ್ನುವುದು ಊಹಾಪೋಹ. ಇದರಲ್ಲಿ ಸೆನ್ಸ್ ಲಾಜಿಕ್ ಎರಡೂ ಇಲ್ಲ. ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ಯಾರ ಪರ ಪ್ರಚಾರ ಮಾಡಬೇಕು ಎನ್ನುವುದು ಅವರ ಇಚ್ಛೆ. ಹೋಗು ಹೋಗಬೇಡ ಎನ್ನಲು ನಾನು ಯಾರು? ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಹಾಗೆಯೇ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರಕ್ಕೆ ಹೋಗಿದ್ದರು. ಪಕ್ಷ ಮುಖ್ಯ ಅಲ್ಲ. ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆʼ ಎಂದು ಸುಮಲತಾ ಅಂಬರೀಶ್ ತಿಳಿಸಿದರು.
ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ʼನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಹೆಚ್ ಡಿಕೆ ಪರ ಪ್ರಚಾರ ಮಾಡುತ್ತೇನೆʼ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…