ರಾಜ್ಯ

ಲೋಕಸಭೆ ಚುನಾವಣೆ 2024: ವೋಟರ್‌ ಐಡಿ ಇಲ್ಲದಿದ್ದರೆ ಚಿಂತೆ ಬೇಡ ಈ ದಾಖಲೆಗಳ ಮೂಲಕವೂ ಮತದಾನ ಮಾಡಬಹುದು

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ ಬಳಿಕ ಮತದಾನ ಕೇಂದ್ರಕ್ಕೆ ಬರುವವರಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. ಆದರೆ 6 ಗಂಟೆಯ ಒಳಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನ ಮಾಡುವ ಅವಕಾಶ ಇರಲಿದೆ.

ಇನ್ನು ಮತದಾನ ಮಾಡಲು ತೆರಳುವವರು ಕಡ್ಡಾಯವಾಗಿ ವೋಟರ್‌ ಐಡಿಯನ್ನೇ ತೆಗೆದುಕೊಂಡು ಬರಬೇಕೆಂಬ ನಿಯಮವೇನಿಲ್ಲ. ಪರ್ಯಾಯವಾಗಿ ಈ ಕೆಳಕಂಡ ದಾಖಲೆಗಳನ್ನು ತೋರಿಸಿ ಸಹ ಮತದಾರರು ತಮ್ಮ ಮತಗಳನ್ನು ಚಲಾಯಿಸಬಹುದಾಗಿದೆ.

* ಆಧಾರ್‌ ಕಾರ್ಡ್‌
* MNREGA ಜಾಬ್‌ಕಾರ್ಡ್‌
* ಬ್ಯಾಂಕ್‌ ಅಥವಾ ಪೋಸ್ಟ್‌ ಆಫೀಸ್‌ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌
* ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಚಾಲನಾ ಪರವಾನಗಿ
* ಪ್ಯಾನ್‌ ಕಾರ್ಡ್‌
* ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್‌ಕಾರ್ಡ್‌, ಭಾರತೀಯ ಪಾಸ್‌ಪೋರ್ಟ್‌
* ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಪಿಎಸ್‌ಯು ಅಥವಾ ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
* ಎಂಪಿಗಳು ಅಥವಾ ಎಂಎಲ್‌ಎಗಳು ಅಥವಾ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
* ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ ( ಯುಐಐಡಿ ) ಕಾರ್ಡ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

2 mins ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

10 mins ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

18 mins ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

30 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago