ರಾಜ್ಯ

ಲೋಕಸಭೆ ಚುನಾವಣೆ 2024: ವೋಟರ್‌ ಐಡಿ ಇಲ್ಲದಿದ್ದರೆ ಚಿಂತೆ ಬೇಡ ಈ ದಾಖಲೆಗಳ ಮೂಲಕವೂ ಮತದಾನ ಮಾಡಬಹುದು

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ ಬಳಿಕ ಮತದಾನ ಕೇಂದ್ರಕ್ಕೆ ಬರುವವರಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. ಆದರೆ 6 ಗಂಟೆಯ ಒಳಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನ ಮಾಡುವ ಅವಕಾಶ ಇರಲಿದೆ.

ಇನ್ನು ಮತದಾನ ಮಾಡಲು ತೆರಳುವವರು ಕಡ್ಡಾಯವಾಗಿ ವೋಟರ್‌ ಐಡಿಯನ್ನೇ ತೆಗೆದುಕೊಂಡು ಬರಬೇಕೆಂಬ ನಿಯಮವೇನಿಲ್ಲ. ಪರ್ಯಾಯವಾಗಿ ಈ ಕೆಳಕಂಡ ದಾಖಲೆಗಳನ್ನು ತೋರಿಸಿ ಸಹ ಮತದಾರರು ತಮ್ಮ ಮತಗಳನ್ನು ಚಲಾಯಿಸಬಹುದಾಗಿದೆ.

* ಆಧಾರ್‌ ಕಾರ್ಡ್‌
* MNREGA ಜಾಬ್‌ಕಾರ್ಡ್‌
* ಬ್ಯಾಂಕ್‌ ಅಥವಾ ಪೋಸ್ಟ್‌ ಆಫೀಸ್‌ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌
* ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಚಾಲನಾ ಪರವಾನಗಿ
* ಪ್ಯಾನ್‌ ಕಾರ್ಡ್‌
* ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್‌ಕಾರ್ಡ್‌, ಭಾರತೀಯ ಪಾಸ್‌ಪೋರ್ಟ್‌
* ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಪಿಎಸ್‌ಯು ಅಥವಾ ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
* ಎಂಪಿಗಳು ಅಥವಾ ಎಂಎಲ್‌ಎಗಳು ಅಥವಾ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
* ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ ( ಯುಐಐಡಿ ) ಕಾರ್ಡ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

11 mins ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

1 hour ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

2 hours ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

3 hours ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

3 hours ago