ಮೈಸೂರು: ನಾಳೆ ( ಏಪ್ರಿಲ್ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ ಬಳಿಕ ಮತದಾನ ಕೇಂದ್ರಕ್ಕೆ ಬರುವವರಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. ಆದರೆ 6 ಗಂಟೆಯ ಒಳಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನ ಮಾಡುವ ಅವಕಾಶ ಇರಲಿದೆ.
ಇನ್ನು ಮತದಾನ ಮಾಡಲು ತೆರಳುವವರು ಕಡ್ಡಾಯವಾಗಿ ವೋಟರ್ ಐಡಿಯನ್ನೇ ತೆಗೆದುಕೊಂಡು ಬರಬೇಕೆಂಬ ನಿಯಮವೇನಿಲ್ಲ. ಪರ್ಯಾಯವಾಗಿ ಈ ಕೆಳಕಂಡ ದಾಖಲೆಗಳನ್ನು ತೋರಿಸಿ ಸಹ ಮತದಾರರು ತಮ್ಮ ಮತಗಳನ್ನು ಚಲಾಯಿಸಬಹುದಾಗಿದೆ.
* ಆಧಾರ್ ಕಾರ್ಡ್
* MNREGA ಜಾಬ್ಕಾರ್ಡ್
* ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ಬುಕ್
* ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ
* ಪ್ಯಾನ್ ಕಾರ್ಡ್
* ಎನ್ಪಿಆರ್ ಅಡಿಯಲ್ಲಿ ಆರ್ಜಿಐ ನೀಡಿದ ಸ್ಮಾರ್ಟ್ಕಾರ್ಡ್, ಭಾರತೀಯ ಪಾಸ್ಪೋರ್ಟ್
* ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಪಿಎಸ್ಯು ಅಥವಾ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
* ಎಂಪಿಗಳು ಅಥವಾ ಎಂಎಲ್ಎಗಳು ಅಥವಾ ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
* ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ ( ಯುಐಐಡಿ ) ಕಾರ್ಡ್
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…