ರಾಜ್ಯ

ಲೋಕಸಭೆ ಚುನಾವಣೆ 2024: ವೋಟರ್‌ ಐಡಿ ಇಲ್ಲದಿದ್ದರೆ ಚಿಂತೆ ಬೇಡ ಈ ದಾಖಲೆಗಳ ಮೂಲಕವೂ ಮತದಾನ ಮಾಡಬಹುದು

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ ಬಳಿಕ ಮತದಾನ ಕೇಂದ್ರಕ್ಕೆ ಬರುವವರಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. ಆದರೆ 6 ಗಂಟೆಯ ಒಳಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನ ಮಾಡುವ ಅವಕಾಶ ಇರಲಿದೆ.

ಇನ್ನು ಮತದಾನ ಮಾಡಲು ತೆರಳುವವರು ಕಡ್ಡಾಯವಾಗಿ ವೋಟರ್‌ ಐಡಿಯನ್ನೇ ತೆಗೆದುಕೊಂಡು ಬರಬೇಕೆಂಬ ನಿಯಮವೇನಿಲ್ಲ. ಪರ್ಯಾಯವಾಗಿ ಈ ಕೆಳಕಂಡ ದಾಖಲೆಗಳನ್ನು ತೋರಿಸಿ ಸಹ ಮತದಾರರು ತಮ್ಮ ಮತಗಳನ್ನು ಚಲಾಯಿಸಬಹುದಾಗಿದೆ.

* ಆಧಾರ್‌ ಕಾರ್ಡ್‌
* MNREGA ಜಾಬ್‌ಕಾರ್ಡ್‌
* ಬ್ಯಾಂಕ್‌ ಅಥವಾ ಪೋಸ್ಟ್‌ ಆಫೀಸ್‌ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌
* ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಚಾಲನಾ ಪರವಾನಗಿ
* ಪ್ಯಾನ್‌ ಕಾರ್ಡ್‌
* ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್‌ಕಾರ್ಡ್‌, ಭಾರತೀಯ ಪಾಸ್‌ಪೋರ್ಟ್‌
* ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಪಿಎಸ್‌ಯು ಅಥವಾ ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
* ಎಂಪಿಗಳು ಅಥವಾ ಎಂಎಲ್‌ಎಗಳು ಅಥವಾ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
* ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ ( ಯುಐಐಡಿ ) ಕಾರ್ಡ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago