ರಾಜ್ಯ

ಲೋಕ ಸಮರ 2024: ಹಲವು ವಿಚಿತ್ರ ಸನ್ನಿವೇಶಗಳಿಗೆ ಸಾಕ್ಷಿಯಾದ ಮೂರನೇ ಹಂತದ ಚುನಾವಣೆ

ಬೆಂಗಳೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಏ.26ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಇಂದು (ಮೇ.7) ಎರಡನೇ ಹಂತದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಹಲವು ವಿಚಿತ್ರ ಘಟನೆಗಳಿಗೆ ಈ ಚುನಾವಣೆ ಸಾಕ್ಷಿಯಾಗಿದೆ.

ಇಂದು (ಮೇ.7) ಎರಡನೇ ಹಂತದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಹಲವು ವಿಚಿತ್ರ ಘಟನೆಗಳಿಗೆ ಈ ಚುನಾವಣೆ ಸಾಕ್ಷಿಯಾಗಿದೆ.

ಶಿಕಾರಿಪುರದ ಹಿತ್ತಲ ಗ್ರಾಮದಲ್ಲಿ ಮತಹಾಕಲು ಹೋಗುತ್ತಿದ್ದ ಯುವಕ ರಸ್ತೆ ಅಪಘಾತದಲ್ಲಿ ಮಡಿದರೇ, ಚುರ್ಚಿಗುಂಡಿಯಿಂದ ಭದ್ರವಾತಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸವಾರ ಮಂಜುನಾಥ್‌ ರಸ್ತೆ ಅಪಘಾತದಲ್ಲಿ ಮಡಿದಿದ್ದಾರೆ.

ಇತ್ತ ಸೊರಬ ತಾಲೂಕಿನ ಕಿಂಸಿ ಗ್ರಾಮದಲ್ಲಿ ಮತದಾನ ಮಾಡಿದ ಬಳಿಕ ವೃದ್ಧೆ ಮಲ್ಲಮ್ಮ (96 ವರ್ಷ) ಮರಣ ಹೊಂದಿದ್ದಾರೆ.

ಪತಿ ಸಾವಿನಲ್ಲಿಯೂ ಮತದಾನ ಮಾಡಿದ ಪತ್ನಿ: ಮಂಗಳೂರು ಜಿಲ್ಲೆಯ ಹೊಸ ನಗರ ತಾಲೂಕಿನ ಆಡುಗೋಡಿಯ ವೆಂಕಟೇಶ್‌ ಅವರು ಅನಾರೋಗ್ಯದಿಂದ ಇಂದು ಮೃತರಾದರು. ಇತ್ತ ಪತಿಯ ಸಾವಿನ ನಡುವೆಯೂ ಪತ್ನಿ ಕಲಾವತಿ ಮತಗಟ್ಟೆಗೆ ಹೋಗಿ ಮತಹಾಕಿ, ಮತದಾನದ ಮಹತ್ವವನ್ನು ಸಾರಿದ್ದಾರೆ.

ಕುಡಿದು ರೋದನೆ ನೀಡಿದ ಮತದಾರ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದ ಮತದಾನೊಬ್ಬ ಕುಡಿದು ಬಂದು ರೋದನೆ ನೀಡಿದ್ದಾರೆ. ಗ್ರಾಮದ 154ನೇ ಮತಗಟ್ಟೆಯ ಮತದಾರನೊಬ್ಬ ಮತ ಚಲಾಯಿಸಿದ್ದಾನೆ. ಮತ ಚಲಾಯಿಸುವಾಗಿ ಇವಿಎಂ ಸದ್ದು ಮಾಡುತ್ತಿಲ್ಲ ಎಂದು ರಗಳೆ ತೆಗೆದಿದ್ದಾನೆ. ಬಳಿಕ ಬಂದ ಭದ್ರತಾ ಸಿಬ್ಬಂದಿ ಆತನನ್ನು ಹೊರಗೆ ದೂಡಿದ್ದಾರೆ. ಹೊರ ಬಿದ್ದ ಮತದಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಮತ್ತೊಂದು ವೀಡಿಯೋ ವೈರಲ್‌: ಹಾವೇರಿ ಲೋಕಸಭಾ ಕ್ಷೇತ್ರದ ಮತದಾನ ಮಾಡಿದ ಮತದಾರನೊಬ್ಬ ತಾನು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದಾನೆ ಮತ್ತು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾನೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago