Lorry crashes into bakery | Three dead; four injured
ತುಮಕೂರು : ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65) ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿದ್ದಾರೆ.
ಇನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ತೀವ್ರ ಸಂತಾಪ ಸೂಚಿಸಿದ್ದು, ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದುಃಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಪೋಸ್ಟ್ ಮಾಡಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…