ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ.
ಸುಮಾರು ಎರಡು ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಹೇಳಲಾಗಿದೆ.
ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಈ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ.
ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, 7 ಲಕ್ಷ ರೂ. ದಂಡ ವಿಧಿಸುವ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದನ್ನು ವಿರೋಧಿಸಿ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರಿಂದ ಕೇಂದ್ರ ಸರ್ಕಾರ ಕಠಿಣ ನಿಯಮ ಜಾರಿಗೊಳಿಸುವುದರಿಂದ ಹಿಂದೆ ಸರಿದಿತ್ತು.
ಲಾರಿ ಮಾಲೀಕರ ಸಂಘಟನೆಗಳೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಲಾಗಿತ್ತು. ಬಳಿಕ ಮುಷ್ಕರ ಹಿಂಪಡೆಯಲಾಗಿತ್ತು.
ಈಗ ಹೊಸ ನಿಯಮ ಜಾರಿಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವುದಾಗಿ ಘೋಷಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…