ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ.
ಸುಮಾರು ಎರಡು ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಹೇಳಲಾಗಿದೆ.
ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಈ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ.
ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, 7 ಲಕ್ಷ ರೂ. ದಂಡ ವಿಧಿಸುವ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದನ್ನು ವಿರೋಧಿಸಿ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರಿಂದ ಕೇಂದ್ರ ಸರ್ಕಾರ ಕಠಿಣ ನಿಯಮ ಜಾರಿಗೊಳಿಸುವುದರಿಂದ ಹಿಂದೆ ಸರಿದಿತ್ತು.
ಲಾರಿ ಮಾಲೀಕರ ಸಂಘಟನೆಗಳೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಲಾಗಿತ್ತು. ಬಳಿಕ ಮುಷ್ಕರ ಹಿಂಪಡೆಯಲಾಗಿತ್ತು.
ಈಗ ಹೊಸ ನಿಯಮ ಜಾರಿಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವುದಾಗಿ ಘೋಷಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…