ರಾಜ್ಯ

ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ನಷ್ಟ : ರಾಜ್ಯ ಸರ್ಕಾರದಿಂದ ಪ್ರಚಾರಾಂದೋಲನ

ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನಕ್ಕೆ ಸುದ್ದಿ ಮಾಧ್ಯಮ, ವೃತ್ತ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣ ಅಭಿಯಾನದ ಮುಂದಿನ ಭಾಗವಾಗಿ ಇಂದು ಅಂತರ್‌ ರಾಜ್ಯ ನೀರು ಹಂಚಿಕೆಗೆ ಸಂಬಂಸಿದ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ, ಅನುದಾನ ಮತ್ತು ಪ್ರಾಶಸ್ತ್ಯ ನೀಡದೆ, ಬರದ ನಡುವೆ ಕನ್ನಡಿಗರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿರುವ ಬಗ್ಗೆ ಧ್ವನಿಯೆತ್ತಲಾಗುವುದು ಎಂದು ತಿಳಿಸಲಾಗಿದೆ.

ಕಾವೇರಿ ನೀರು ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಯ ಬಗ್ಗೆ ಪ್ರಧಾನಿ ಮೋದಿ ಅವರ ಮೌನ, ಮೇಕೆದಾಟು ಯೋಜನೆಗೆ ಸಿಗದ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಘೋಷಿಸಲಾದ ಅನುದಾನ ಬಜೆಟ್ ಪುಸ್ತಕಕ್ಕಷ್ಟೇ ಸೀಮಿತವಾಗಿರುವುದು ಹೀಗೆ ಕೇಂದ್ರದ ಅಸಹಕಾರದಿಂದಾಗಿ ಕರುನಾಡು ಬಡವಾಗುತ್ತಿರುವ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಲಾಗುವುದು. ಜನರ ಪರವಾದ ಈ ಕೂಗಿಗೆ ತಮ್ಮೆಲ್ಲರ ಬೆಂಬಲವಿರಲಿ ಎಂದು ಮನವಿ ಮಾಡಿದ್ದಾರೆ.

lokesh

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

7 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

24 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

36 mins ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

39 mins ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

47 mins ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

51 mins ago