ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿಂದು ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅದನ್ನು ಅಧ್ಯಯನ ಮಾಡಿಲ್ಲ. ಅದನ್ನು ತೆಗೆದುಕೊಂಡು ನೋಡುತ್ತೇನೆ ಎಂದರು.
ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಇದನ್ನು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ. ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…