ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಲಭಿಸದ ಫಲಿತಾಂಶ, ರಾಜ್ಯದಲ್ಲಿ ಕಡಿಮೆ ಸ್ಥಾನ, ಪರಿಶಿಷ್ಟ ನಿಗಮದ ಹಗರಣ ಆರೋಪ ಹಿನ್ನೆಲೆ ಸಚಿವರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಉಸ್ತುವಾರಿ ಹೊತ್ತ ಸಚಿವರು ಕ್ಷೇತ್ರದಲ್ಲಿ ಕಡಿಮೆ ಮತಗಳಿಸಿ ಸೋತಿದಕ್ಕೆ ರಾಹುಲ್ ಗಾಂಧಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಹೇಳಿದವರಿಗೆ ಟಿಕೆಟ್ ನೀಡಿದ್ದೇವೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿತ್ತು. ಆದರೆ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದೆ ಹೀಗಾಗದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ರಾಹುಲ್ ಗಾಂಧಿ ಅವರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರು ಸರ್ಕಾರಕ್ಕೆ ಧಕ್ಕೆ ಅಥವಾ ಮುಜುಗರ ಬರುವಂತ ಕೆಲಸ ಮಾಡಬಾರದು. ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದು ಇಕ್ಕಟ್ಟಿಗೆ ಸಿಲುಕಿಸಬಾರದು. ಜೊತೆಗೆ ವಿರೋಧ ಪಕ್ಷಗಳ ವಾಗ್ದಾಳಿಗೆ ಸಿಲುಕದಂತೆ ಕೆಲಸ ಮಾಡಿ ಎಂದು ಎಲ್ಲಾ ಸಚಿವರಿಗೆ ಅವರು ಸೂಚಿಸಿದ್ದಾರೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…