ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಲಭಿಸದ ಫಲಿತಾಂಶ, ರಾಜ್ಯದಲ್ಲಿ ಕಡಿಮೆ ಸ್ಥಾನ, ಪರಿಶಿಷ್ಟ ನಿಗಮದ ಹಗರಣ ಆರೋಪ ಹಿನ್ನೆಲೆ ಸಚಿವರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಉಸ್ತುವಾರಿ ಹೊತ್ತ ಸಚಿವರು ಕ್ಷೇತ್ರದಲ್ಲಿ ಕಡಿಮೆ ಮತಗಳಿಸಿ ಸೋತಿದಕ್ಕೆ ರಾಹುಲ್ ಗಾಂಧಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಹೇಳಿದವರಿಗೆ ಟಿಕೆಟ್ ನೀಡಿದ್ದೇವೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿತ್ತು. ಆದರೆ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದೆ ಹೀಗಾಗದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ರಾಹುಲ್ ಗಾಂಧಿ ಅವರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರು ಸರ್ಕಾರಕ್ಕೆ ಧಕ್ಕೆ ಅಥವಾ ಮುಜುಗರ ಬರುವಂತ ಕೆಲಸ ಮಾಡಬಾರದು. ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದು ಇಕ್ಕಟ್ಟಿಗೆ ಸಿಲುಕಿಸಬಾರದು. ಜೊತೆಗೆ ವಿರೋಧ ಪಕ್ಷಗಳ ವಾಗ್ದಾಳಿಗೆ ಸಿಲುಕದಂತೆ ಕೆಲಸ ಮಾಡಿ ಎಂದು ಎಲ್ಲಾ ಸಚಿವರಿಗೆ ಅವರು ಸೂಚಿಸಿದ್ದಾರೆ.
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…