ರಾಜ್ಯ

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ ಅನಿಲ ಸಿಲಿಂಡರ್‌ಗಳು ಸಿಗದೆ ಹೋಟೆಲ್‌ ಮುಚ್ಚುವ ಮಟ್ಟ ತಲುಪಿವೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, ‘ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಸಂಸತ್ ಅಧಿವೇಶನದಲ್ಲಿ ಈ ವಿಚಾರವನ್ನ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕು. ಈ ವಿಚಾರ ಚರ್ಚೆ ನಡೆಸಲು ಇವತ್ತಿನ ತನಕ ಅವಕಾಶ ನೀಡುತ್ತಿಲ್ಲ. ಆದ ಕಾರಣಕ್ಕೆ ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಹೋಟೆಲ್ ಹಾಗೂ ಇತರೇ ಉದ್ದಿಮೆಗಳು ಇದರಿಂದ ತೊಂದರೆಗೆ ಒಳಗಾಗಿವೆ. ಇದರ ಬಗ್ಗೆ ನಾವು ದನಿ ಎತ್ತಬೇಕಿರುವುದು ನಮ್ಮ ಕರ್ತವ್ಯ. ಕೋಟ್ಯಂತರ ಮಹಿಳೆಯರ ಮೇಲೆ ಇದು ಪರಿಣಾಮ ಬೀರಿದೆ. ಯುದ್ದದ ಪರಿಣಾಮವಾಗಿ ಸೌದಿ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಭಾರತೀಯ ಉದ್ಯಮಿಗಳು, ಕೆಲಸಗಾರರ ಮೇಲೆ ಪರಿಣಾಮ ಬೀರಿದೆ ಎಂದರು.

ದೇವೇಗೌಡರ ಮನಸ್ಸು ನೋಯಿಸಲು ಇಷ್ಟಪಡುವುದಿಲ್ಲ
ದೇವೇಗೌಡರು ಮೇಕೆದಾಟು, ಎತ್ತಿನಹೊಳೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಮಾತನಾಡುವಂತೆ ಹೇಳಲಿ. ಈ ವಯಸ್ಸಿನಲ್ಲಿ ಅವರ ಮೇಲೆ ವಾಗ್ದಾಳಿ ಮಾಡುವುದು ಸರಿಯಲ್ಲ. ನನಗೆ ಇಷ್ಟವೂ ಇಲ್ಲ. ಈ ವಯಸ್ಸಿನಲ್ಲಿ ಮನಸ್ಸು ನೋಯಿಸುವುದು ಬೇಡ ಎಂದುಕೊಂಡಿರುವೆ. ಅವರೇ ಇವುಗಳಿಗೆ ಪರಿಹಾರ ಸೂಚಿಸಲಿ. ಅದೇ ರೀತಿ ಅವರ ಪಕ್ಷದ ಸದಸ್ಯರುಗಳಿಗೆ ವಿಧಾನಸಭೆಯಲ್ಲಿ ಮಾತನಾಡಲು ಹೇಳಲಿ. ಆಗ ನಾನು ನಮ್ಮ ಕಾಲದಲ್ಲಿ ಏನೇನು ಆಗಿದೆ ಎಂದು ಹೇಳುತ್ತೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿರುವ ಬಗ್ಗೆ ಕೇಳಿದಾಗ, ‘ಶಾಸಕರಿಗೆ ಹಾಗೂ ಬೆಂಗಳೂರಿನಲ್ಲಿರುವ ಎಐಸಿಸಿ ಕಾರ್ಯದರ್ಶಿಗಳಿಗೆ, ಸಂಸದರಿಗೆ ಔತಣಕೂಟ ಏರ್ಪಡಿಸಲಾಗಿದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ದಿನದಿಂದ ಇಲ್ಲಿಯವರೆಗಿನ ಪ್ರಯಾಣವನ್ನ ಪ್ರತ್ಯೇಕ ಮಾಧ್ಯಮಗೋಷ್ಟಿ ನಡೆಸಿ ವಿವರಿಸುತ್ತೇನೆ ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

33 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago