DCM DK Shivakumar
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ ಅನಿಲ ಸಿಲಿಂಡರ್ಗಳು ಸಿಗದೆ ಹೋಟೆಲ್ ಮುಚ್ಚುವ ಮಟ್ಟ ತಲುಪಿವೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, ‘ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಸಂಸತ್ ಅಧಿವೇಶನದಲ್ಲಿ ಈ ವಿಚಾರವನ್ನ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕು. ಈ ವಿಚಾರ ಚರ್ಚೆ ನಡೆಸಲು ಇವತ್ತಿನ ತನಕ ಅವಕಾಶ ನೀಡುತ್ತಿಲ್ಲ. ಆದ ಕಾರಣಕ್ಕೆ ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಹೋಟೆಲ್ ಹಾಗೂ ಇತರೇ ಉದ್ದಿಮೆಗಳು ಇದರಿಂದ ತೊಂದರೆಗೆ ಒಳಗಾಗಿವೆ. ಇದರ ಬಗ್ಗೆ ನಾವು ದನಿ ಎತ್ತಬೇಕಿರುವುದು ನಮ್ಮ ಕರ್ತವ್ಯ. ಕೋಟ್ಯಂತರ ಮಹಿಳೆಯರ ಮೇಲೆ ಇದು ಪರಿಣಾಮ ಬೀರಿದೆ. ಯುದ್ದದ ಪರಿಣಾಮವಾಗಿ ಸೌದಿ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಭಾರತೀಯ ಉದ್ಯಮಿಗಳು, ಕೆಲಸಗಾರರ ಮೇಲೆ ಪರಿಣಾಮ ಬೀರಿದೆ ಎಂದರು.
ದೇವೇಗೌಡರ ಮನಸ್ಸು ನೋಯಿಸಲು ಇಷ್ಟಪಡುವುದಿಲ್ಲ
ದೇವೇಗೌಡರು ಮೇಕೆದಾಟು, ಎತ್ತಿನಹೊಳೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಮಾತನಾಡುವಂತೆ ಹೇಳಲಿ. ಈ ವಯಸ್ಸಿನಲ್ಲಿ ಅವರ ಮೇಲೆ ವಾಗ್ದಾಳಿ ಮಾಡುವುದು ಸರಿಯಲ್ಲ. ನನಗೆ ಇಷ್ಟವೂ ಇಲ್ಲ. ಈ ವಯಸ್ಸಿನಲ್ಲಿ ಮನಸ್ಸು ನೋಯಿಸುವುದು ಬೇಡ ಎಂದುಕೊಂಡಿರುವೆ. ಅವರೇ ಇವುಗಳಿಗೆ ಪರಿಹಾರ ಸೂಚಿಸಲಿ. ಅದೇ ರೀತಿ ಅವರ ಪಕ್ಷದ ಸದಸ್ಯರುಗಳಿಗೆ ವಿಧಾನಸಭೆಯಲ್ಲಿ ಮಾತನಾಡಲು ಹೇಳಲಿ. ಆಗ ನಾನು ನಮ್ಮ ಕಾಲದಲ್ಲಿ ಏನೇನು ಆಗಿದೆ ಎಂದು ಹೇಳುತ್ತೇನೆ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿರುವ ಬಗ್ಗೆ ಕೇಳಿದಾಗ, ‘ಶಾಸಕರಿಗೆ ಹಾಗೂ ಬೆಂಗಳೂರಿನಲ್ಲಿರುವ ಎಐಸಿಸಿ ಕಾರ್ಯದರ್ಶಿಗಳಿಗೆ, ಸಂಸದರಿಗೆ ಔತಣಕೂಟ ಏರ್ಪಡಿಸಲಾಗಿದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ದಿನದಿಂದ ಇಲ್ಲಿಯವರೆಗಿನ ಪ್ರಯಾಣವನ್ನ ಪ್ರತ್ಯೇಕ ಮಾಧ್ಯಮಗೋಷ್ಟಿ ನಡೆಸಿ ವಿವರಿಸುತ್ತೇನೆ ಎಂದು ಮಾಹಿತಿ ನೀಡಿದರು.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…