Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ ಗಂಭೀರ ಪರಿಣಾಮ ಬೀರಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಯುದ್ಧದ ಪರಿಣಾಮ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಧರ್ಮ. ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಲ್ಪ ಯಶಸ್ಸು ಕಾಣುತ್ತಿದೆ ಎಂದು ಹೇಳಿದರು.

 

Tags:
error: Content is protected !!