ರಾಜ್ಯ

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ.

16 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಇರುವ ಅಪೋಲೋ ಓಷನ್‌ ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು, ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.

ಕತಾರಿನ ರಾಸ್‌ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌ ಹೊತ್ತ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಸರಕು ಹಡಗು ಗುಜರಾತಿನ ಮುದ್ರಾ ಬಂದರಿಗೆ ಮಾ.16ಕ್ಕೆ ಬಂದಿತ್ತು. ಈ ಹಡಗು ನಂತರ ಮಂಗಳೂರಿಗೆ ಬರಬೇಕಿತ್ತು. ಆದರೆ ಶಿವಾಲಿಕ್‌ನಲ್ಲಿದ್ದ ಎಲ್ಲಾ ಸರಕನ್ನು ಗುಜರಾತಿನ ಮುದ್ರಾ ಬಂದರಿನಲ್ಲಿ ಇಳಿಸಲಾಗಿತ್ತು. ಅಲ್ಲಿಂದ ಸುಮಾರು 16 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿಯನ್ನು ಈ ಅಪೋಲೋ ಓಷನ್‌ ಹಡಗಿಗೆ ತುಂಬಿಸಲಾಗಿತ್ತು.

ಬಂದರು ಅಧಿಕಾರಿಗಳು ಇನ್ನೂ ಎರಡು ಕಚ್ಚಾ ತೈಲ ಟ್ಯಾಂಕರ್‌ಗಳು ಶೀಘ್ರದಲ್ಲೇ ಮಂಗಳೂರಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…

50 mins ago

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…

2 hours ago

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…

3 hours ago

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

8 hours ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

8 hours ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

8 hours ago