ವಿಜಯಪುರ: ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ನಡೆಯೋಲ್ಲ ಅಂದರೆ ಪ್ರಧಾನಿ ಮೋದಿ ಅವರು ಯಾಕೆ ಕಾಪಿ ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಇಂದು(ಫೆಬ್ರವರಿ.19) ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನೇ ಪ್ರಧಾನಿ ಮೋದಿ ಅವರಿ ಕಾಪಿ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ನಡೆಯಲ್ಲ ಅಂದರೆ ಅವರು ಯಾಕೆ ಕಾಪಿ ಮಾಡುತ್ತಿದ್ದಾರೆ? ಮಹಿಳೆಯರು ಮತ್ತು ಬಡವರನ್ನು ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಅವುಗಳು ಮುಂದುವರೆಯಲಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಹ ಆಗಲಿವೆ ಎಂದು ತೀರುಗೇಟು ನೀಡಿದ್ದಾರೆ.
ಇದೇ ವೇಳೆ ಕೆಲ ತಿಂಗಳಿನಿಂದ ಗೃಹಲಕ್ಷ್ಮೀ ಹಣ ಪಾವತಿಯಾಗಿಲ್ಲ ಎಂಬ ಬಗ್ಗೆ ಮಾತನಾಡಿದ ಅವರು, ಈ ಕುರಿತು ಚರ್ಚೆ ಮಾಡಲಾಗುತ್ತಿದೆ. ಗೃಹಲಕ್ಷ್ಕೀ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಬಡವರು ಉಳಿದರೆ ಅವರಿಗೂ ಸಿಗಬೇಕೆಂದು ಶ್ರೀಮಂತರು ಹಾಗೂ ಉಳ್ಳವರು ತಾವೇ ಬಿಟ್ಟು ಕೊಡಬೇಕು. ಇಲ್ಲವಾದರೆ ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮೀ ಯೋಜನೆಯಿಂದ ತೆಗೆದು ಹಾಕುತ್ತದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…