ರಾಜ್ಯ

ಬಿಡದಿಯಲ್ಲಿ ವಿಮಾನ ನಿಲ್ದಾಣ ಮಾಡುತ್ತಿಲ್ಲ, ಗ್ರೇಟರ್‌ ಬಿಡದಿ ಲೇಔಟ್‌ ಆಗುತ್ತಿದೆ: ಎಂ.ಬಿ.ಪಾಟೀಲ್‌

ಬೆಂಗಳೂರು: ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಿಗೆ ಅಲ್ಲಿ ಗ್ರೇಟರ್‌ ಬಿಡದಿ ಲೇಔಟ್‌ ಮಾಡಲು ನಿವೇಶನ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.8) ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಬಿಡದಿ ಸೂಕ್ತವಲ್ಲವೆಂದು ಈ ಹಿಂದೆ ಟಿಕ್ನಿಕಲ್ ವರದಿ ನೀಡಿದೆ. ಹಾಗಾಗಿ ಕನಕಪುರದ ಹಾರೋಹಳ್ಳಿ ಸಮೀಪದಲ್ಲಿ ಒಂದು ಸ್ಥಳ ನೋಡಲಾಗಿದೆ. ಅಲ್ಲದೇ ಕುಣಿಗಲ್ ರಸ್ತೆ ಬಳಿಯೂ ಒಂದು ಜಾಗ ನೋಡಿದ್ದೇವೆ. ಇವೆರಡೂ ವಿಧಾನಸೌಧದಿಂದ 50 ಕಿ.ಮೀ ದೂರ ಇವೆ ಎಂದರು.

ಟೆಕ್ನಿಕಲ್‌ ತಂಡದರು ಇಂದು ಮತ್ತು ನಾಳೆವರೆಗೂ ಜೊತೆಯಲ್ಲಿಯೇ ಇರುತ್ತಾರೆ. ಅವರೆಲ್ಲರೂ ಸ್ಥಳ ಪರಿಶೀಲನೆ ಮಾಡಿದ ಬಳಿಕ ದೆಹಲಿಗೆ ತೆರಳಿ ಆ ಸ್ಥಳಗಳ ಬಗ್ಗೆ ವರದಿ ನೀಡುತ್ತಾರೆ. ಇನ್ನೂ ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು. ಆ ನಂತರ ನಾವು ಸಮಗ್ರ ಯೋಜನಾ ವರದಿ (DPR) ಮಾಡಬೇಕಾಗುತ್ತದೆ. ಅಲ್ಲದೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಯಾವ ಯಾವ ದೊಡ್ಡ ದೊಡ್ಡ ಕಂಪೆನಿಗಳು ಇವೆ ಎಂಬುದನ್ನು ನೋಡಬೇಕಾಗುತ್ತದೆ. ಇದಾದ ಮೇಲೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆದ ನಂತರ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

15 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

32 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

42 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

50 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago